ದೇಶ- ವಿದೇಶ

ಭಾರತಕ್ಕೆ ರಷ್ಯಾ ಕಚ್ಚ ತೈಲ ಆಮದು ಹೆಚ್ಚು : ಮತ್ತೆ ಸುಂಕದ ಬೆದರಿಕೆಯೊಡ್ಡಿದ ಟ್ರಂಪ್‌

ವಾಷಿಂಗ್ಟನ್ : ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟ ಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಟ್ರುಥ್‌ ನಲ್ಲಿ ಎಚ್ಚರಿಕೆ ನೀಡಿರುವ ಟ್ರಂಪ್‌, ಭಾರತದಿಂದ ಖರೀದಿಸುವ ಎಲ್ಲ ಆಮದು ವಸ್ತುಗಳ ಮೇಲೆ ಸುಂಕ ಗಣನೀಯ ಏರಿಕೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಅತ್ತ ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‍ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ, ಸುಂಕ ಹೇರುವ ಪರಿಣಾಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ದೇಶದ ಹಿತಾಸಕ್ತಿ ಕಾಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

ಈಗಾಗಲೇ ಆಗಸ್ಟ್ 7ರಿಂದ ಅನ್ವಯವಾಗುವಂತೆ ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ ಶೇ.19 ಸುಂಕ ವಿಧಿಸಿದ್ದಾರೆ.
ಬೃಹತ್ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

4 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

9 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

18 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

37 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

46 mins ago