ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್ರಾಜ್ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.
ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್ ಆಫೀಸ್ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.