ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್ರಾಜ್ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.
ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್ ಆಫೀಸ್ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…