ದೇಶ- ವಿದೇಶ

ಭಾರತ ಈಗ ವಿಶ್ವದ ಕಾರ್ಖಾನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ್‌ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್‌ರಾಜ್‌ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.

ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್‌ ಆಫೀಸ್‌ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

19 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

20 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

22 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

24 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

29 mins ago