ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಆರು ಮಂದಿ ಸೇರಿ ಅಭಿಮನ್ಯುವನ್ನು ಹತ್ಯೆ ಮಾಡಿದರು. ಚಕ್ರವ್ಯೂಹ ಎಂದರೆ ಭಯ ಹಾಗೂ ಹಿಂಸೆ. ಅದರೊಳಗೆ ಸಿಲುಕಿಸಿ ಅಭಿಮನ್ಯುವನ್ನು ಕೊಂದು ಹಾಕಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತವು ಇಂದು ಕಮಲದ(ಬಿಜೆಪಿ) ಚಿಹ್ನೆಯನ್ನು ಪ್ರತಿನಿಧಿಸುವ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದೆ. ಅದನ್ನು ಆರು ಮಂದಿ ನಿಯಂತ್ರಿಸಿಸುತ್ತಿದ್ದಾರೆ. 21 ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹದ ರೂಪ ತಾಳಿರುವ ಕಮಲವನ್ನು ಪ್ರಧಾನಿ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡಿರುತ್ತಾರೆ.
ಅಂದು ಅಭಿಮನ್ಯುವಿನೊಂದಿಗೆ ಏನು ಮಾಡಲಾಗಿಯೆಯೋ ಅದನ್ನೇ ಇಂದು ನಮ್ಮ ದೇಶದ ರೈತರು, ಕಾರ್ಮಿಕರು ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಅಂದು ಆರು ಮಂದಿ ಸೇರಿ ಚಕ್ರವ್ಯೂಹ ರಚಿಸಿ ಅಭಿಮನ್ಯುವನ್ನು ಕೊಲೆ ಮಾಡಿದರು. ಇಂದು ಕೇಂದ್ರ ಸರ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಉದ್ಯಮಪತಿಗಳಾದ ಅಂಬಾನಿ ಹಾಗೂ ಅದಾನಿ ಸೇರಿ ಚಕ್ರವ್ಯೂಹ ರಚಿಸಿಕೊಂಡಿದ್ದಾರೆ ಎಂದು ರಾಹುಲ್ಗಾಂಧಿ ಅಭಿಪ್ರಾಯಿಸಿದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…