ದೇಶ- ವಿದೇಶ

ಭಾರತ ದೇಶ ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ.

1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು ಅಸಾಧಾರಣ ಎಂದು ಮೋದಿ ಬಣ್ಣಿಸಿದರು.

ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ. 2047ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಸಂಕಲ್ಪ ಮಾಡಲಾಗಿದೆ. ಈ ಗುರಿಯನ್ನು ಸಾಧಿಸಲು ಅದರ ಏಕತೆ ಅತಿದೊಡ್ಡ ಅವಶ್ಯಕತೆಯಾಗಿದೆ. ಸಂವಿಧಾನವೇ ನಮ್ಮ ಏಕತೆಗೆ ಆಧಾರವಾಗಿದೆ ಎಂದರು.

ಇನ್ನು ಸ್ವಾತಂತ್ರ್ಯ ನಂತರ ಭಾರತವು ತನ್ನ ಪ್ರಜಾಸತ್ತಾತ್ಮಕ ಭವಿಷ್ಯದ ಬಗ್ಗೆ ಎಲ್ಲಾ ಆತಂಕಗಳನ್ನು ಬದಿಗಿರಿಸಿದೆ. ಸಂವಿಧಾನವು ಇಂದು ದೇಶವನ್ನು ಈ ಹಂತಕ್ಕೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಂವಿಧಾನ ರಚಿಸಿದವರ ಸ್ಪೂರ್ತಿಗೆ ತಕ್ಕಂತೆ ಬದುಕುತ್ತಿರುವುದಕ್ಕೆ ಸಂವಿಧಾನ ರಚನಾಕಾರರು ಮತ್ತು ದೇಶದ ಪ್ರಜೆಗಳಿಗೆ ಗೌರವ ಸಲ್ಲಿಸಿದರು.

ಪುರುಷೋತ್ತಮ ದಾಸ್‌ ಟಂಡನ್‌ ಹಾಗೂ ಭೀಮ್‌ ರಾವ್‌ ಅಂಬೇಡ್ಕರ್‌ ಅವರಂತಹ ಗಣ್ಯ ವ್ಯಕ್ತಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂವಿಧಾನ ರಚನೆಯಲ್ಲಿ ತೊಡಗಿದ್ದವರಿಗೆ ಭಾರತವು 1947ರಲ್ಲಿ ಹುಟ್ಟಿಲ್ಲ ಅಥವಾ 1950ರಲ್ಲಿ ಪ್ರಜಾಪ್ರಭುತ್ವಕ್ಕೆ ತಿರುಗಿಲ್ಲ ಎಂದು ತುಂಬಾ ಚೆನ್ನಾಗಿ ತಿಳಿದಿತ್ತು ಎಂದರು.

ಸಂವಿಧಾನವು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ್ದು, ದೇಶ ಈಗ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ನೋಡುತ್ತಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಕ್ಕಾಗಿ ಸಂಸದರನ್ನು ಶ್ಲಾಘಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

27 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

53 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago