ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ.
1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು ಅಸಾಧಾರಣ ಎಂದು ಮೋದಿ ಬಣ್ಣಿಸಿದರು.
ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ. 2047ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಸಂಕಲ್ಪ ಮಾಡಲಾಗಿದೆ. ಈ ಗುರಿಯನ್ನು ಸಾಧಿಸಲು ಅದರ ಏಕತೆ ಅತಿದೊಡ್ಡ ಅವಶ್ಯಕತೆಯಾಗಿದೆ. ಸಂವಿಧಾನವೇ ನಮ್ಮ ಏಕತೆಗೆ ಆಧಾರವಾಗಿದೆ ಎಂದರು.
ಇನ್ನು ಸ್ವಾತಂತ್ರ್ಯ ನಂತರ ಭಾರತವು ತನ್ನ ಪ್ರಜಾಸತ್ತಾತ್ಮಕ ಭವಿಷ್ಯದ ಬಗ್ಗೆ ಎಲ್ಲಾ ಆತಂಕಗಳನ್ನು ಬದಿಗಿರಿಸಿದೆ. ಸಂವಿಧಾನವು ಇಂದು ದೇಶವನ್ನು ಈ ಹಂತಕ್ಕೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಂವಿಧಾನ ರಚಿಸಿದವರ ಸ್ಪೂರ್ತಿಗೆ ತಕ್ಕಂತೆ ಬದುಕುತ್ತಿರುವುದಕ್ಕೆ ಸಂವಿಧಾನ ರಚನಾಕಾರರು ಮತ್ತು ದೇಶದ ಪ್ರಜೆಗಳಿಗೆ ಗೌರವ ಸಲ್ಲಿಸಿದರು.
ಪುರುಷೋತ್ತಮ ದಾಸ್ ಟಂಡನ್ ಹಾಗೂ ಭೀಮ್ ರಾವ್ ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂವಿಧಾನ ರಚನೆಯಲ್ಲಿ ತೊಡಗಿದ್ದವರಿಗೆ ಭಾರತವು 1947ರಲ್ಲಿ ಹುಟ್ಟಿಲ್ಲ ಅಥವಾ 1950ರಲ್ಲಿ ಪ್ರಜಾಪ್ರಭುತ್ವಕ್ಕೆ ತಿರುಗಿಲ್ಲ ಎಂದು ತುಂಬಾ ಚೆನ್ನಾಗಿ ತಿಳಿದಿತ್ತು ಎಂದರು.
ಸಂವಿಧಾನವು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ್ದು, ದೇಶ ಈಗ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ನೋಡುತ್ತಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಕ್ಕಾಗಿ ಸಂಸದರನ್ನು ಶ್ಲಾಘಿಸಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…