ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ.
1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು ಅಸಾಧಾರಣ ಎಂದು ಮೋದಿ ಬಣ್ಣಿಸಿದರು.
ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ. 2047ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಸಂಕಲ್ಪ ಮಾಡಲಾಗಿದೆ. ಈ ಗುರಿಯನ್ನು ಸಾಧಿಸಲು ಅದರ ಏಕತೆ ಅತಿದೊಡ್ಡ ಅವಶ್ಯಕತೆಯಾಗಿದೆ. ಸಂವಿಧಾನವೇ ನಮ್ಮ ಏಕತೆಗೆ ಆಧಾರವಾಗಿದೆ ಎಂದರು.
ಇನ್ನು ಸ್ವಾತಂತ್ರ್ಯ ನಂತರ ಭಾರತವು ತನ್ನ ಪ್ರಜಾಸತ್ತಾತ್ಮಕ ಭವಿಷ್ಯದ ಬಗ್ಗೆ ಎಲ್ಲಾ ಆತಂಕಗಳನ್ನು ಬದಿಗಿರಿಸಿದೆ. ಸಂವಿಧಾನವು ಇಂದು ದೇಶವನ್ನು ಈ ಹಂತಕ್ಕೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಂವಿಧಾನ ರಚಿಸಿದವರ ಸ್ಪೂರ್ತಿಗೆ ತಕ್ಕಂತೆ ಬದುಕುತ್ತಿರುವುದಕ್ಕೆ ಸಂವಿಧಾನ ರಚನಾಕಾರರು ಮತ್ತು ದೇಶದ ಪ್ರಜೆಗಳಿಗೆ ಗೌರವ ಸಲ್ಲಿಸಿದರು.
ಪುರುಷೋತ್ತಮ ದಾಸ್ ಟಂಡನ್ ಹಾಗೂ ಭೀಮ್ ರಾವ್ ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂವಿಧಾನ ರಚನೆಯಲ್ಲಿ ತೊಡಗಿದ್ದವರಿಗೆ ಭಾರತವು 1947ರಲ್ಲಿ ಹುಟ್ಟಿಲ್ಲ ಅಥವಾ 1950ರಲ್ಲಿ ಪ್ರಜಾಪ್ರಭುತ್ವಕ್ಕೆ ತಿರುಗಿಲ್ಲ ಎಂದು ತುಂಬಾ ಚೆನ್ನಾಗಿ ತಿಳಿದಿತ್ತು ಎಂದರು.
ಸಂವಿಧಾನವು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ್ದು, ದೇಶ ಈಗ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ನೋಡುತ್ತಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಕ್ಕಾಗಿ ಸಂಸದರನ್ನು ಶ್ಲಾಘಿಸಿದರು.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…