ದೇಶ- ವಿದೇಶ

ಭಾರತ ದೇಶ ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ.

1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು ಅಸಾಧಾರಣ ಎಂದು ಮೋದಿ ಬಣ್ಣಿಸಿದರು.

ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ. 2047ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಸಂಕಲ್ಪ ಮಾಡಲಾಗಿದೆ. ಈ ಗುರಿಯನ್ನು ಸಾಧಿಸಲು ಅದರ ಏಕತೆ ಅತಿದೊಡ್ಡ ಅವಶ್ಯಕತೆಯಾಗಿದೆ. ಸಂವಿಧಾನವೇ ನಮ್ಮ ಏಕತೆಗೆ ಆಧಾರವಾಗಿದೆ ಎಂದರು.

ಇನ್ನು ಸ್ವಾತಂತ್ರ್ಯ ನಂತರ ಭಾರತವು ತನ್ನ ಪ್ರಜಾಸತ್ತಾತ್ಮಕ ಭವಿಷ್ಯದ ಬಗ್ಗೆ ಎಲ್ಲಾ ಆತಂಕಗಳನ್ನು ಬದಿಗಿರಿಸಿದೆ. ಸಂವಿಧಾನವು ಇಂದು ದೇಶವನ್ನು ಈ ಹಂತಕ್ಕೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಂವಿಧಾನ ರಚಿಸಿದವರ ಸ್ಪೂರ್ತಿಗೆ ತಕ್ಕಂತೆ ಬದುಕುತ್ತಿರುವುದಕ್ಕೆ ಸಂವಿಧಾನ ರಚನಾಕಾರರು ಮತ್ತು ದೇಶದ ಪ್ರಜೆಗಳಿಗೆ ಗೌರವ ಸಲ್ಲಿಸಿದರು.

ಪುರುಷೋತ್ತಮ ದಾಸ್‌ ಟಂಡನ್‌ ಹಾಗೂ ಭೀಮ್‌ ರಾವ್‌ ಅಂಬೇಡ್ಕರ್‌ ಅವರಂತಹ ಗಣ್ಯ ವ್ಯಕ್ತಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂವಿಧಾನ ರಚನೆಯಲ್ಲಿ ತೊಡಗಿದ್ದವರಿಗೆ ಭಾರತವು 1947ರಲ್ಲಿ ಹುಟ್ಟಿಲ್ಲ ಅಥವಾ 1950ರಲ್ಲಿ ಪ್ರಜಾಪ್ರಭುತ್ವಕ್ಕೆ ತಿರುಗಿಲ್ಲ ಎಂದು ತುಂಬಾ ಚೆನ್ನಾಗಿ ತಿಳಿದಿತ್ತು ಎಂದರು.

ಸಂವಿಧಾನವು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ್ದು, ದೇಶ ಈಗ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ನೋಡುತ್ತಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಕ್ಕಾಗಿ ಸಂಸದರನ್ನು ಶ್ಲಾಘಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago