ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್ ಪ್ರವೇಶಿಸಿದರು.
ಈ ಮೂಲಕ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನದ ರಕ್ಷಣೆಯ ಹೊಣೆ ನಮ್ಮದು, ನಾವು ಸಂವಿಧಾನ ಉಳಿಸುತ್ತೇವೆ ಎಂದು ಸಾರಿ ಹೇಳಿದೆ. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಇಂಡಿಯಾದ ನಾಯಕರನ್ನು ʼಪ್ರಜಾಪ್ರಭುತ್ವದ ರಕ್ಷಕರುʼ ಎಂದು ಕರೆದರು. ಈ ವೇಳೆ ಇಂಡಿಯಾದ ಎಲ್ಲಾ ನಾಯಕರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎನ್ನುವುದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ಇಂಡಿಯಾ ನಾಯಕರ ಹೇಳಿದರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರು ಸಂವಿಧಾನ ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂಡಿಯಾ ನಾಯಕರು ಇಂದು ಒಗ್ಗೂಡಿ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಮೋದಿಜಿ ಅವರು ಸಂವಿಧಾನ ಪ್ರಕಾರ ಆಡಳಿತ ನಡೆಸಬೇಕು ಎಂದು ತೋರಿಸಲು ಬಯಸುತ್ತೇವೆ ಎಂದರು.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…