ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್ ಪ್ರವೇಶಿಸಿದರು.
ಈ ಮೂಲಕ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನದ ರಕ್ಷಣೆಯ ಹೊಣೆ ನಮ್ಮದು, ನಾವು ಸಂವಿಧಾನ ಉಳಿಸುತ್ತೇವೆ ಎಂದು ಸಾರಿ ಹೇಳಿದೆ. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಇಂಡಿಯಾದ ನಾಯಕರನ್ನು ʼಪ್ರಜಾಪ್ರಭುತ್ವದ ರಕ್ಷಕರುʼ ಎಂದು ಕರೆದರು. ಈ ವೇಳೆ ಇಂಡಿಯಾದ ಎಲ್ಲಾ ನಾಯಕರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎನ್ನುವುದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ಇಂಡಿಯಾ ನಾಯಕರ ಹೇಳಿದರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರು ಸಂವಿಧಾನ ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂಡಿಯಾ ನಾಯಕರು ಇಂದು ಒಗ್ಗೂಡಿ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಮೋದಿಜಿ ಅವರು ಸಂವಿಧಾನ ಪ್ರಕಾರ ಆಡಳಿತ ನಡೆಸಬೇಕು ಎಂದು ತೋರಿಸಲು ಬಯಸುತ್ತೇವೆ ಎಂದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…