ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್ ಪ್ರವೇಶಿಸಿದರು.
ಈ ಮೂಲಕ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನದ ರಕ್ಷಣೆಯ ಹೊಣೆ ನಮ್ಮದು, ನಾವು ಸಂವಿಧಾನ ಉಳಿಸುತ್ತೇವೆ ಎಂದು ಸಾರಿ ಹೇಳಿದೆ. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಇಂಡಿಯಾದ ನಾಯಕರನ್ನು ʼಪ್ರಜಾಪ್ರಭುತ್ವದ ರಕ್ಷಕರುʼ ಎಂದು ಕರೆದರು. ಈ ವೇಳೆ ಇಂಡಿಯಾದ ಎಲ್ಲಾ ನಾಯಕರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎನ್ನುವುದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ಇಂಡಿಯಾ ನಾಯಕರ ಹೇಳಿದರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರು ಸಂವಿಧಾನ ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂಡಿಯಾ ನಾಯಕರು ಇಂದು ಒಗ್ಗೂಡಿ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಮೋದಿಜಿ ಅವರು ಸಂವಿಧಾನ ಪ್ರಕಾರ ಆಡಳಿತ ನಡೆಸಬೇಕು ಎಂದು ತೋರಿಸಲು ಬಯಸುತ್ತೇವೆ ಎಂದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…