ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್ ಪ್ರವೇಶಿಸಿದರು.
ಈ ಮೂಲಕ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನದ ರಕ್ಷಣೆಯ ಹೊಣೆ ನಮ್ಮದು, ನಾವು ಸಂವಿಧಾನ ಉಳಿಸುತ್ತೇವೆ ಎಂದು ಸಾರಿ ಹೇಳಿದೆ. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಇಂಡಿಯಾದ ನಾಯಕರನ್ನು ʼಪ್ರಜಾಪ್ರಭುತ್ವದ ರಕ್ಷಕರುʼ ಎಂದು ಕರೆದರು. ಈ ವೇಳೆ ಇಂಡಿಯಾದ ಎಲ್ಲಾ ನಾಯಕರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎನ್ನುವುದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ಇಂಡಿಯಾ ನಾಯಕರ ಹೇಳಿದರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರು ಸಂವಿಧಾನ ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂಡಿಯಾ ನಾಯಕರು ಇಂದು ಒಗ್ಗೂಡಿ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಮೋದಿಜಿ ಅವರು ಸಂವಿಧಾನ ಪ್ರಕಾರ ಆಡಳಿತ ನಡೆಸಬೇಕು ಎಂದು ತೋರಿಸಲು ಬಯಸುತ್ತೇವೆ ಎಂದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…