ದೇಶ- ವಿದೇಶ

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್‌ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಓದು ಕರ್ನಾಟಕ ಕಾರ್ಯಕ್ರಮ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…

3 mins ago

ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಪಾಲಿಕೆ!!

ದಿನೇಶ್‌ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…

7 mins ago

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

11 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

12 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

13 hours ago