ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.
ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು
ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…