ದೇಶ- ವಿದೇಶ

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್‌ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago