ದೇಶ- ವಿದೇಶ

ಹೆಚ್ಚುತ್ತಿರುವ ಜನಸಂಖ್ಯೆಯು ದೇಶಕ್ಕೆ ದೊಡ್ಡ ಸವಾಲಾಗಿದೆ: ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ

ಪ್ರಯಾಗ್‌ ರಾಜ್:‌ ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

ತುರ್ತು ಪರಿಸ್ಥಿತಿ ಕಾಲದಿಂದಲೂ ನಾವು ಭಾರತೀಯರು ಜನಸಂಖ್ಯಾ ನಿಯಂತ್ರಣಕ್ಕೆ ಸಾಕಷ್ಟು ಗಮನ ಹರಿಸಿಲ್ಲ. ಇದು ನಮ್ಮ ದೇಶವನ್ನು ಸುಸ್ಥಿರಗೊಳಿಸುವಲ್ಲಿ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದರು.

ಯುಎಸ್, ಬ್ರೆಜಿಲ್‌ ಮತ್ತು ಚೀನಾ ದೇಶಗಳಿಗೆ ಹೋಲಿಸಿದರೆ ಅವುಗಳು ಹೆಚ್ಚಿನ ಭೂಮಿ ಲಭ್ಯತೆ ಹೊಂದಿವೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನಿಜವಾದ ವೃತ್ತಿಪರನ ಜವಾಬ್ದಾರಿಯಾಗಿದೆ.

ಒಂದು ತಲೆಮಾರು ಮುಂದಿನವರ ಬದುಕನ್ನು ಹಸನಾಗಿಸಲು ಹಲವಾರು ತ್ಯಾಗಗಳನ್ನು ಮಾಡಬೇಕು. ನನ್ನ ಪ್ರಗತಿಗಾಗಿ ನನ್ನ ತಂದೆ-ತಾಯಿ, ಒಡಹುಟ್ಟಿದವರು ಮತ್ತು ಶಿಕ್ಷಕರು ಗಣನೀಯ ತ್ಯಾಗ ಮಾಡಿದ್ದಾರೆ ಎಂದರು.

ಜನಸಂಖ್ಯಾ ನಿಯಂತ್ರಣದತ್ತ ನಾವು ಮಹತ್ವದ  ಹೆಜ್ಜೆ ಇಡಬೇಕು. ಜನಸಂಖ್ಯೆ ನಿಯಂತ್ರಣಕ್ಕೆ ನಾವು ಸಹ ಕೈಜೋಡಿಸಬೇಕು ಎಂದು ಕರೆಕೊಟ್ಟರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

26 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

37 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

44 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

54 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago