ದೇಶ- ವಿದೇಶ

ಹೆಚ್ಚುತ್ತಿರುವ ಜನಸಂಖ್ಯೆಯು ದೇಶಕ್ಕೆ ದೊಡ್ಡ ಸವಾಲಾಗಿದೆ: ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ

ಪ್ರಯಾಗ್‌ ರಾಜ್:‌ ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

ತುರ್ತು ಪರಿಸ್ಥಿತಿ ಕಾಲದಿಂದಲೂ ನಾವು ಭಾರತೀಯರು ಜನಸಂಖ್ಯಾ ನಿಯಂತ್ರಣಕ್ಕೆ ಸಾಕಷ್ಟು ಗಮನ ಹರಿಸಿಲ್ಲ. ಇದು ನಮ್ಮ ದೇಶವನ್ನು ಸುಸ್ಥಿರಗೊಳಿಸುವಲ್ಲಿ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದರು.

ಯುಎಸ್, ಬ್ರೆಜಿಲ್‌ ಮತ್ತು ಚೀನಾ ದೇಶಗಳಿಗೆ ಹೋಲಿಸಿದರೆ ಅವುಗಳು ಹೆಚ್ಚಿನ ಭೂಮಿ ಲಭ್ಯತೆ ಹೊಂದಿವೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನಿಜವಾದ ವೃತ್ತಿಪರನ ಜವಾಬ್ದಾರಿಯಾಗಿದೆ.

ಒಂದು ತಲೆಮಾರು ಮುಂದಿನವರ ಬದುಕನ್ನು ಹಸನಾಗಿಸಲು ಹಲವಾರು ತ್ಯಾಗಗಳನ್ನು ಮಾಡಬೇಕು. ನನ್ನ ಪ್ರಗತಿಗಾಗಿ ನನ್ನ ತಂದೆ-ತಾಯಿ, ಒಡಹುಟ್ಟಿದವರು ಮತ್ತು ಶಿಕ್ಷಕರು ಗಣನೀಯ ತ್ಯಾಗ ಮಾಡಿದ್ದಾರೆ ಎಂದರು.

ಜನಸಂಖ್ಯಾ ನಿಯಂತ್ರಣದತ್ತ ನಾವು ಮಹತ್ವದ  ಹೆಜ್ಜೆ ಇಡಬೇಕು. ಜನಸಂಖ್ಯೆ ನಿಯಂತ್ರಣಕ್ಕೆ ನಾವು ಸಹ ಕೈಜೋಡಿಸಬೇಕು ಎಂದು ಕರೆಕೊಟ್ಟರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

3 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

4 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

4 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

5 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

6 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

6 hours ago