ನವದೆಹಲಿ: ನಮ್ಮ ದೇಶಕ್ಕೆ 4000 ಸಾವಿರ ವರ್ಷಗಳ ಇತಿಹಾಸವಿದೆ. ಈ ದೇಶದಲ್ಲಿ ಜನರು ಯಾವತ್ತೂ ಸರ್ವಾಧಿಕಾರತ್ವವನ್ನು ಸಹಿಸಿಕೊಂಡಿಲ್ಲ. ಇಂದು ನಾವೆಲ್ಲರೂ ಸೇರಿಕೊಂಡು ದೇಶವನ್ನು ಸರ್ವಾಧಿಕಾರತ್ವದಿಂದ ರಕ್ಷಿಸಬೇಕಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.
ನಿನ್ನೆ(ಮೇ.10) ಜೈಲಿನಿಂದ ಬಿಡುಗಡೆ ಹೊಂದಿದ ಬಳಿಕ ತೆರೆದ ವಾಹನದಲ್ಲಿ ಸಾವಿರಾರು ಎಎಪಿ ಕಾರ್ಯಕರ್ತರ ನಡುವೆ ತರೆದ ವಾಹನದಲ್ಲಿ ನಿಂತು ಅವರು ಮಾತನಾಡಿದರು.
ನಾನು ಆದಷ್ಟು ಬೇಗ ಬರುತ್ತೇನೆ ಎಂದು ಹೇಳಿದ್ದೆ. ಅದರಂತೆಯೇ ನಿಮ್ಮ ಮುಂದೆ ಬಂದಿರುವುದು ಸಂತೋಷದ ವಿಷಯವಾಗಿದೆ. ಈ ಸಮಯದಲ್ಲಿ ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರಿಂದಾಗಿಯೇ ನಾನು ಇಂದು ನಿಮ್ಮ ಮುಂದೆ ನಿಂತಿದ್ದೇನೆ. ದೇಶಾದ್ಯಂತ ಕೋಟ್ಯಾಂತರ ಜನರು ನನಗೆ ಆಶೀರ್ವಾದ ನೀಡಿದ್ದಾರೆ. ಇದಕ್ಕೆ ನಾನು ಋಣಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನಾಳೆ ಬೆಳಿಗ್ಗೆ 11ಗಂಟೆಗೆ ಕನೌಟ್ ಪ್ಲೇಸ್ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಲಿದ್ದೇನೆ. ದೇವರ ಆಶೀರ್ವಾದ ಪಡೆದು ಮದ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದೇನೆ. ಮತ್ತು ಸಂಜೆ ದಕ್ಷಿಣ ದೆಹಲಿಯ ರೋಡ್ ಶೋನಲ್ಲಿ ಭಾಗವಹಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
https://x.com/AamAadmiParty/status/1788927026318987270
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…