ನವದೆಹಲಿ: ನಮ್ಮ ದೇಶಕ್ಕೆ 4000 ಸಾವಿರ ವರ್ಷಗಳ ಇತಿಹಾಸವಿದೆ. ಈ ದೇಶದಲ್ಲಿ ಜನರು ಯಾವತ್ತೂ ಸರ್ವಾಧಿಕಾರತ್ವವನ್ನು ಸಹಿಸಿಕೊಂಡಿಲ್ಲ. ಇಂದು ನಾವೆಲ್ಲರೂ ಸೇರಿಕೊಂಡು ದೇಶವನ್ನು ಸರ್ವಾಧಿಕಾರತ್ವದಿಂದ ರಕ್ಷಿಸಬೇಕಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.
ನಿನ್ನೆ(ಮೇ.10) ಜೈಲಿನಿಂದ ಬಿಡುಗಡೆ ಹೊಂದಿದ ಬಳಿಕ ತೆರೆದ ವಾಹನದಲ್ಲಿ ಸಾವಿರಾರು ಎಎಪಿ ಕಾರ್ಯಕರ್ತರ ನಡುವೆ ತರೆದ ವಾಹನದಲ್ಲಿ ನಿಂತು ಅವರು ಮಾತನಾಡಿದರು.
ನಾನು ಆದಷ್ಟು ಬೇಗ ಬರುತ್ತೇನೆ ಎಂದು ಹೇಳಿದ್ದೆ. ಅದರಂತೆಯೇ ನಿಮ್ಮ ಮುಂದೆ ಬಂದಿರುವುದು ಸಂತೋಷದ ವಿಷಯವಾಗಿದೆ. ಈ ಸಮಯದಲ್ಲಿ ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರಿಂದಾಗಿಯೇ ನಾನು ಇಂದು ನಿಮ್ಮ ಮುಂದೆ ನಿಂತಿದ್ದೇನೆ. ದೇಶಾದ್ಯಂತ ಕೋಟ್ಯಾಂತರ ಜನರು ನನಗೆ ಆಶೀರ್ವಾದ ನೀಡಿದ್ದಾರೆ. ಇದಕ್ಕೆ ನಾನು ಋಣಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನಾಳೆ ಬೆಳಿಗ್ಗೆ 11ಗಂಟೆಗೆ ಕನೌಟ್ ಪ್ಲೇಸ್ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಲಿದ್ದೇನೆ. ದೇವರ ಆಶೀರ್ವಾದ ಪಡೆದು ಮದ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದೇನೆ. ಮತ್ತು ಸಂಜೆ ದಕ್ಷಿಣ ದೆಹಲಿಯ ರೋಡ್ ಶೋನಲ್ಲಿ ಭಾಗವಹಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
https://x.com/AamAadmiParty/status/1788927026318987270
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…