ದೇಶ- ವಿದೇಶ

ವಿಜಯ್ ಮಲ್ಯರನ್ನು ಭಾರತಕ್ಕೆ ಕರೆತರಲು ವಿದೇಶದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಭಾರತ

ಹೊಸದಿಲ್ಲಿ: ಭಾರತ ದೇಶ ಬಿಟ್ಟು ಪಲಾಯನ ಮಾಡಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಯಾವುದೇ ಷರತ್ತುಗಳಿಲ್ಲದೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಫ್ರಾನ್ಸ್ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.

ಏ.15 ರಂದು ನಡೆದ ಭಾರತ- ಫ್ರಾನ್ಸ್ ಜಂಟಿ ಕಾರ್ಯಾಚರಣೆ ಸಭೆಯಲ್ಲಿ ವಿಜಯ ಮಲ್ಯ‌ ವಿಷಯ ಕುರಿತು ಚರ್ಚಿಸಲಾಯಿತು. ಈ ವೇಳೆ ಫ್ರಾನ್ಸ್ ಅಧಿಕಾರಿಗಳು ಕೆಲವು ಷರತ್ತುಗೊಳೊಂದಿಗೆ ಹಸ್ತಾಂತರಿಸಲು ಹೇಳಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಭಾರತ ಯಾವುದೇ ಪೂರ್ವ ಷರತ್ತುಗಳಿಲ್ಲದೇ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ತಿಳಿಸಿತು.

ವಿಜಯ್ ಮಲ್ಯ ಪ್ರಸ್ತುತ ಬ್ರಿಟನ್‌ಲ್ಲಿದ್ದಾರೆ. ಆದರೆ ಫ್ರಾನ್ಸ್‌ನಲ್ಲೂ ಅವರು ಆಸ್ತಿ ಹೊಂದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಮಲ್ಯ ಪಲಾಯನ ಮಾಡದಂತೆ ಜೊತೆಗೆ ವಿದೇಶಗಳಲ್ಲಿ ಗಡಿಪಾರು ಕುರಿತು ಭಾರತ ಮಾತುಕತೆ ನಡೆಸುತ್ತಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

2 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

5 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

5 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

5 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

8 hours ago