ಭಾಗಲ್ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತರನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಭಾಗಲ್ಪುರದಲ್ಲಿ ಶುಕ್ರವಾರ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ-ಆರ್ಎಸ್ಎಸ್ ಸಂವಿಧಾನವನ್ನು ರದ್ದುಗೊಳಿಸಲು ಸಂಚು ರೂಪಿಸಿದೆ. ಭಾರತದ ಬಡವರು, ದಲಿತರು, ಬುಡಕಟ್ಟು ಸಮುದಾಯದವರಿಗೆ ದೊರಕಿರುವ ಸೌಲಭ್ಯಗಳೆಲ್ಲಾ ಸಂವಿಧಾನದಿಂದ ಬಂದದ್ದು, ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ನಿಮ್ಮ ಸೌಲಭ್ಯಗಳೆಲ್ಲಾ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ದೇಶದ ಕೆಲವೇ ಕೆಲ ಶ್ರೀಮಂತರ ಪರವಾಗಿ ಇದೆ. ಇಡೀ ದೇಶದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ ಎಂದರು.
ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ 150 ಸ್ಥಾನಗಳನ್ನು ಅದು ಗೆಲ್ಲುವುದಿಲ್ಲ ಎಂದು ಹೇಳಿದರು.
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…