ಭಾಗಲ್ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತರನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಭಾಗಲ್ಪುರದಲ್ಲಿ ಶುಕ್ರವಾರ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ-ಆರ್ಎಸ್ಎಸ್ ಸಂವಿಧಾನವನ್ನು ರದ್ದುಗೊಳಿಸಲು ಸಂಚು ರೂಪಿಸಿದೆ. ಭಾರತದ ಬಡವರು, ದಲಿತರು, ಬುಡಕಟ್ಟು ಸಮುದಾಯದವರಿಗೆ ದೊರಕಿರುವ ಸೌಲಭ್ಯಗಳೆಲ್ಲಾ ಸಂವಿಧಾನದಿಂದ ಬಂದದ್ದು, ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ನಿಮ್ಮ ಸೌಲಭ್ಯಗಳೆಲ್ಲಾ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ದೇಶದ ಕೆಲವೇ ಕೆಲ ಶ್ರೀಮಂತರ ಪರವಾಗಿ ಇದೆ. ಇಡೀ ದೇಶದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ ಎಂದರು.
ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ 150 ಸ್ಥಾನಗಳನ್ನು ಅದು ಗೆಲ್ಲುವುದಿಲ್ಲ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…