ದೇಶ- ವಿದೇಶ

ಭಾರತವು ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ಶೀಘ್ರದಲ್ಲೇ ಭಾರತವು ತನ್ನದೇ ಆದ ಸ್ವಂತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಪ್ರಯುಕ್ತ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಬಾಹ್ಯಾಕಾಶದಲ್ಲಿ ಭಾರತವು ಸ್ವಂತ ನಿಲ್ದಾಣವನ್ನು ಹೊಂದಬೇಕೆಂಬುದು ದಶಕಗಳ ಕನಸು. ಅದು ಶೀಘ್ರದಲ್ಲೇ ಸಾಕಾರಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಬಾಹ್ಯಾಕಾಶಕ್ಕೆ ತೆರಳಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ತಂಡವನ್ನು ರಚನೆ ಮಾಡಲಿದೆ. ಯುವಜನರು ಇದರಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕೆಂದು ಕರೆ ಕೊಟ್ಟರು.

ಮೂರು ದಿನಗಳ ಹಿಂದೆ ನಾನು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾದೆ. ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆ ತುಂಬಿದರು. ಅವರು ನನಗೆ ತ್ರಿವರ್ಣ ಧ್ವಜವನ್ನು ತೋರಿಸುತ್ತಿದ್ದ ಕ್ಷಣ, ಅನುಭವ ಪದಗಳಿಗೆ ಮೀರಿದ್ದು ಎಂದು ಹೇಳಿದರು.

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗಿನ ನನ್ನ ಚರ್ಚೆಯಲ್ಲಿ, ನವ ಭಾರತದ ಯುವಕರ ಅಪಾರ ಧೈರ್ಯ ಮತ್ತು ಅನಂತ ಕನಸುಗಳನ್ನು ನಾನು ನೋಡಿದ್ದೇನೆ. ಈ ಕನಸುಗಳನ್ನು ಮುಂದಕ್ಕೆ ಕೊಂಡೊಯ್ಯಲು, ನಾವು ಭಾರತದ ಗಗನಯಾತ್ರಿಗಳ ಗುಂಪನ್ನು ಸಹ ಸಿದ್ಧಪಡಿಸಲಿದ್ದೇವೆ. ಇಂದು ಬಾಹ್ಯಾಕಾಶ ದಿನದಂದು, ಭಾರತದ ಕನಸುಗಳಿಗೆ ರೆಕ್ಕೆಗಳನ್ನು ನೀಡಲು ಈ ಗಗನಯಾತ್ರಿಗಳ ಗುಂಪಿಗೆ ಸೇರಲು ನಾನು ನನ್ನ ಯುವ ಸ್ನೇಹಿತರನ್ನು ಆಹ್ವಾನಿಸುತ್ತೇನೆ ಎಂದು ನುಡಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago