ಹೊಸದಿಲ್ಲಿ : ಭಾರತ ಯಾವುದೇ ರೀತಿಯ ಉಗ್ರವಾದ ಹಾಗೂ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.
ಆಪರೇಷನ್ ಸಿಂದೂರ ಬಳಿಕ ಸೋಮವಾರ ದೇಶವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಮೋದಿ, ಭಯೋತ್ಪಾದನೆ ನಿರ್ಮೂಲನೆ ಮಾಡಲು ಭಾರತೀಯ ಸೇನೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಘೋಷಿಸಿದರು.
ಭಯೋತ್ಪಾದಕರ ಪಹಲ್ಗಾಮ ದಾಳಿಯು ಅನಾಗರಿಕ ಮುಖ ಎಂದು ಹೇಳಿದ ಮೋದಿ, ಅದು ನನಗೆ ವೈಯಕ್ತಿಕ ನೋವು ನೀಡಿದೆ. ನಮ್ಮ ಮಹಿಳೆಯರ ಹಣೆಯ ಸಿಂಧೂರ ತೆಗೆದರೆ ಅದರ ಪರಿಣಾಮ ಹೇಗಿರುತ್ತದೆ ಎಂದು ಇದೀಗ ಶತ್ರು ರಾಷ್ಟ್ರಗಳು ಅರಿತುಕೊಂಡಿವೆ ಎಂದು ಹೇಳಿದರು.
ಆಪರೇಷನ್ ಸಿಂದೂರ ಕೇವಲ ಹೆಸರಾಗಿರಲಿಲ್ಲ ಅದು ಭಾರತೀಯತೆಯ ಪ್ರತೀಕವಾಗಿದೆ ಎಂದ ಅವರು ನಾನು ಈ ಕಾರ್ಯಾಚರಣೆಯಲ್ಲಿ ನಮ್ಮ ಭದ್ರತಾ ಪಡೆಗಳನ್ನು ಅಭಿನಂದಿಸಲು ಬಯಸುತ್ತೇನೆ ಎಂದರು.
ಭಾರತ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸುವುದಲ್ಲಿ. ಪಾಕಿಸ್ತಾನದ ವಿರುದ್ಧ ನಮ್ಮ ಕಾರ್ಯಾಚರಣೆ ಸ್ಥಗಿತವಾಗಿದೆ ಅಷ್ಟೆ ನಿಂತಿಲ್ಲ. ಪಾಕಿಸ್ತಾನದ ನಡವಳಿಕೆ ಮೇಲೆ ನಮ್ಮ ಕಾರ್ಯಾಚರಣೆ ಅವಲಂಬಿಸಿರುತ್ತದೆ. ಆಪರೇಷನ ಸಿಂದೂರ ಭಯೋತ್ಪಾದನೆ ವಿರುದ್ಧ ಭಾರತದ ಹೊಸ ನೀತಿಯಾಗಿದೆ ಎಂದು ಅವರು ಹೇಳಿದರು.
ಮಾತುಕತೆಗೆ ಒಪ್ಪುವುದೇ ಆದರೆ….
ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಇರಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಸಹ ಒಟ್ಟಿಗೆ ಇರಲು ಸಾಧ್ಯವಿಲ್ಲ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದೇ ಆದರೆ, ಅದು ಭಯೋತ್ಪಾದಕರ ಹಸ್ತಾಂತರ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ವಿಚಾರವೇ ಇರುತ್ತದೆ ಎಂಬುದನ್ನು ಸ್ಪಷ್ಟಪಡಿಸಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…