ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಇದರಲ್ಲಿ ಕಳೆದ ವರ್ಷ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ಗಡಿಯಾಚೆಗಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ನಿಖರ ದಾಳಿಗಳು ಹಾಗೂ ನಂತರದ ಪಾಕಿಸ್ತಾನಿ ವಾಯುನೆಲೆಗಳು ಮತ್ತು ಅವುಗಳ ರಾಡೃ ವ್ಯವಸ್ಥೆಗಳ ಮೇಲಿನ ದಾಳಿಗಳನ್ನು ತೋರಿಸಲಾಗಿದೆ.
ಮೂರು ನಿಮಿಷಗಳ ವಿಡಿಯೋವು 2001ರಲ್ಲಿ ಸಂಸತ್ತಿನ ಮೇಲಿನ ದಾಳಿ, 2002ರಲ್ಲಿ ಅಕ್ಷರಧಾಮ ದೇವಾಲಯ, 2008ರಲ್ಲಿ ಮುಂಬೈ, 2016ರಲ್ಲಿ ಪುಲ್ವಾಮಾ ಮತ್ತು 2025ರಲ್ಲಿ ಪಹಲ್ಗಾಮ್ ಸೇರಿದಂತೆ ಪ್ರಮುಖ ಭಯೋತ್ಪಾದಕ ಘಟನೆಗಳನ್ನು ಪಟ್ಟಿ ಮಾಡುವ ಮೂಲಕ ಪ್ರಾರಂಭವಾಗುತ್ತದೆ.
ಈ ವಿಡಿಯೋವು ಮೇ.7, 2025ರ ರಾತ್ರಿ ಒಂಭತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತೀಯ ಪಡೆಗಳು ಹೇಗೆ ದಾಳಿ ನಡೆಸಿದವು ಎಂಬುದನ್ನು ತೋರಿಸಿದೆ.
ಆಪರೇಷನ್ ಸಿಂಧೂರ್ ಭಾಗವಾಗಿ ನಡೆಸಲಾದ ಸಂಘಟಿತ ದಾಳಿಗಳನ್ನು ದೃಶ್ಯಗಳು ತೋರಿಸಿವೆ. ಪಾಕಿಸ್ತಾನವನ್ನು ಹೆಸರಿಸದೇ, ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶಗಳ ಬಳಿ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯ ನಂತರದ ಪರಿಣಾಮಗಳ್ನನು ಸಹ ವಿಡಿಯೋದಲ್ಲಿ ತೋರಿಸಲಾಗಿದೆ. ಡ್ರೋನ್ಗಳನ್ನು ಹೊಡೆದುರುಳಿಸುವ ಮೂಲಕ ಹಾಗೂ ಮಿಲಿಟರಿ ಪೋಸ್ಟ್ಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಪಡೆಗಳು ನಡೆಸಿದ ಪ್ರತೀಕಾರವನ್ನು ಸಹ ಇದು ತೋರಿಸಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…