ಭಾರತ-ಪಾಕಿಸ್ತಾನ ಸಂಘರ್ಷ | ಪಾಕ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಲ್ಲಿ : ಪಂಜಾಬ್‌ನ ಅಮೃತಸರದ ಹಲವೆಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್‌ ದಾಳಿಯನ್ನು ವಿಫಲಗೊಳಿಸುಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಕ್ಷಣಾ ಸಚಿವಾಲಯ, ಪಾಕಿಸ್ತಾನವು ಡ್ರೋನ್‌ ದಾಳಿ ಮತ್ತು ಯುದ್ಧಸಾಮಾಗ್ರಿಗಳೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದನ್ನು ಮುಂದುವರೆಸಿದೆ ಎಂದು ಹೇಳಿದೆ.

ಇಂದು ಬೆಳಿಗ್ಗೆ 5 ಗಂಟೆಗೆ ಅಮೃತಸರದ ಹಲವೆಡೆ ಪಾಕ್‌ ಡ್ರೋನ್‌ಗಳು ಪತ್ತೆಯಾಗಿದೆ, ಅವುಗಳನ್ನು ಭಾರತೀಯ ವಾಯು ರಕ್ಷಣಾ ಪಡೆಗಳ ನಾಶಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:- ಮೈಸೂರು | ಗಾಂಜಾ ಸಂಗ್ರಹ ; ಮಹಿಳೆ ಪೊಲೀಸ್ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗೆ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್‌ ದಾಳಿ ಮಾಡಿದೆ. ಈ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಅಂತರರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್‌ ಡ್ರೋನ್‌ ಹಾರಿಸಲಾಗಿದೆ. ಸ್ಥಳೀಯ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಿಕರು ಅನಗತ್ಯವಾಗಿ ಹೊರಗಡೆ ಓಡಾಡಬಾರದು. ಜೊತೆಗೆ ಸುರಕ್ಷತಾ ಸೂಚನೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

18 mins ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

35 mins ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

2 hours ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

3 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

4 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

4 hours ago