ಹೊಸದಿಲ್ಲಿ : ಪಂಜಾಬ್ನ ಅಮೃತಸರದ ಹಲವೆಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್ ದಾಳಿಯನ್ನು ವಿಫಲಗೊಳಿಸುಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವಾಲಯ, ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಾಗ್ರಿಗಳೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದನ್ನು ಮುಂದುವರೆಸಿದೆ ಎಂದು ಹೇಳಿದೆ.
ಇಂದು ಬೆಳಿಗ್ಗೆ 5 ಗಂಟೆಗೆ ಅಮೃತಸರದ ಹಲವೆಡೆ ಪಾಕ್ ಡ್ರೋನ್ಗಳು ಪತ್ತೆಯಾಗಿದೆ, ಅವುಗಳನ್ನು ಭಾರತೀಯ ವಾಯು ರಕ್ಷಣಾ ಪಡೆಗಳ ನಾಶಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:- ಮೈಸೂರು | ಗಾಂಜಾ ಸಂಗ್ರಹ ; ಮಹಿಳೆ ಪೊಲೀಸ್ ವಶಕ್ಕೆ
ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್ವರೆಗೆ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್ ದಾಳಿ ಮಾಡಿದೆ. ಈ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಅಂತರರಾಷ್ಟ್ರೀಯ ಗಡಿ ಮತ್ತು ಎಲ್ಒಸಿಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ಹಾರಿಸಲಾಗಿದೆ. ಸ್ಥಳೀಯ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಿಕರು ಅನಗತ್ಯವಾಗಿ ಹೊರಗಡೆ ಓಡಾಡಬಾರದು. ಜೊತೆಗೆ ಸುರಕ್ಷತಾ ಸೂಚನೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…