ದೇಶ- ವಿದೇಶ

40 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ಭಾರತೀಯ ಗಗನಯಾತ್ರಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಶುಭಾಂಶು ಶುಕ್ಲಾ

ಅಮೇರಿಕಾ: ಭಾರತದ ಬಾಹ್ಯಾಕಾಶ ಯಾನದಲ್ಲಿ ಐತಿಹಾಸಿಕ ಕ್ಷಣ ಕೊನೆಗೂ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದಾರೆ.

ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್‌4 ಮಿಷನ್‌ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದೆ.

ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್‌-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ ಎಕ್ಸ್‌ ಫಾಲ್ಕನ್‌-9 ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಪ್ರಯಾಣ ಬೆಳೆಸಿದೆ.

ಇದಕ್ಕೂ ಮೊದಲು ಭಾರತದ ರಾಕೇಶ್‌ ಶರ್ಮಾ ಅವರು ಅಂತರಿಕ್ಷಯಾನ ಪ್ರವಾಸ ಕೈಗೊಂಡಿದ್ದರು. 1984ರಲ್ಲಿ ರಷ್ಯಾದ ಸೋಯುಜ್‌ ನೌಕೆಯಲ್ಲಿ ಅಂತರಿಕ್ಷ ಪ್ರವಾಸ ಮಾಡಿ ರಾಕೇಶ್‌ ಶರ್ಮಾ ಇತಿಹಾಸ ನಿರ್ಮಿಸಿದ್ದರು. ಇದೀಗ ಮತ್ತೊಬ್ಬ ಭಾರತೀಯ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶ ನಿಲ್ದಾಣದತ್ತ ಪ್ರಯಾಣ ಬೆಳೆಸಿದ್ದು, ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಎರಡನೇ ಭಾರತೀಯರಾಗಿದ್ದಾರೆ.

ಜೂನ್.‌26ರ ಸಂಜೆ ಬಾಹ್ಯಾಕಾಶ ನಿಲ್ದಾಣದಲ್ಲಿ ನೌಕೆ ಡಾಕಿಂಗ್‌ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಶುಭಾಂಶು ಶುಕ್ಲಾ ಜೊತೆಗೆ ಅಮೇರಿಕಾದ ಪೆಗ್ಗಿ ವಿಟ್ಸನ್‌, ತಜ್ಞರಾದ ಹಂಗೇರಿಯ ಟಿಗೋರ್‌ ಕಾಪು ಹಗೂ ಪೊಲೆಂಡ್‌ನ ಸ್ಲಾವೋಸ್ಜ್‌ ಉನ್ನಾನ್ಸ್ಕಿ ಪಯಣ ಬೆಳೆಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಲಕ್ನೋದಲ್ಲಿ ಶುಭಾಂಶು ಶುಕ್ಲಾ ಅವರ ಪೋಷಕರು ಈ ಕಾರ್ಯಾಚರಣೆಯ ವೀಕ್ಷಣೆ ಮಾಡಿ ಸಂತಸಪಟ್ಟರು.

ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶದಿಂದ ಸಂದೇಶ ರವಾನಿಸಿದ್ದು, ಜೈಹಿಂದೆ, ಜೈ ಭಾರತ್‌. ಇದೊಂದು ಅದ್ಭುತ ಪ್ರಯಾಣ . ನನ್ನ ಹೆಗಲ ಮೇಲೆ ತ್ರಿವರ್ಣ ಧ್ವಜವಿದೆ ಎಂದು ಸಂತಸಪಟ್ಟಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

45 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

2 hours ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

2 hours ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago