ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ.
ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಯ್ದೆ ಜಾರಿಗೊಳಿಸುವ ಬಗ್ಗೆ ತನ್ನ ನಿಲುವಿಗೆ ಬದ್ಧವಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ೧೪ ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುವಾರ್ ಭಲ್ಲಾ ಅವರು ಪ್ರವಾಣ ಪತ್ರ ಹಸ್ತಾಂತರಿಸಿದ್ದಾರೆ. ಆ ಮೂಲಕ ವಲಸಿಗರಲ್ಲಿ ಪೌರತ್ವದ ಭರವಸೆ ಮೂಡಿಸಿದ್ದಾರೆ. ಪೌರತ್ವ ಪಡೆದವರಲ್ಲಿ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.
ಸಿಎಎ ಕಾಯ್ದೆಯಡಿ ಭಾರತದ ಪೌರತ್ವ ಪಡೆಯುವ ಅರ್ಹತಾ ಅವಧಿಯನ್ನು ೧೧ ವರ್ಷಗಳಿಂದ ೫ ವರ್ಷಕ್ಕೆ ಇಳಿಸಲಾಗಿದೆ. ಈ ಕಾಯ್ದೆ ಅನ್ವಯ ೨೦೧೪ ಡಿಸೆಂಬರ್ ೩೧ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಪೌರತ್ವಕ್ಕೆ ಅರ್ಜಿ ಸಲ್ಲಿಸಲು ವೆಬ್ಸೈಟ್ವೊಂದನ್ನು ಆರಂಭಿಸಲಾಗಿತ್ತು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…