ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ.
ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಯ್ದೆ ಜಾರಿಗೊಳಿಸುವ ಬಗ್ಗೆ ತನ್ನ ನಿಲುವಿಗೆ ಬದ್ಧವಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ೧೪ ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುವಾರ್ ಭಲ್ಲಾ ಅವರು ಪ್ರವಾಣ ಪತ್ರ ಹಸ್ತಾಂತರಿಸಿದ್ದಾರೆ. ಆ ಮೂಲಕ ವಲಸಿಗರಲ್ಲಿ ಪೌರತ್ವದ ಭರವಸೆ ಮೂಡಿಸಿದ್ದಾರೆ. ಪೌರತ್ವ ಪಡೆದವರಲ್ಲಿ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.
ಸಿಎಎ ಕಾಯ್ದೆಯಡಿ ಭಾರತದ ಪೌರತ್ವ ಪಡೆಯುವ ಅರ್ಹತಾ ಅವಧಿಯನ್ನು ೧೧ ವರ್ಷಗಳಿಂದ ೫ ವರ್ಷಕ್ಕೆ ಇಳಿಸಲಾಗಿದೆ. ಈ ಕಾಯ್ದೆ ಅನ್ವಯ ೨೦೧೪ ಡಿಸೆಂಬರ್ ೩೧ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಪೌರತ್ವಕ್ಕೆ ಅರ್ಜಿ ಸಲ್ಲಿಸಲು ವೆಬ್ಸೈಟ್ವೊಂದನ್ನು ಆರಂಭಿಸಲಾಗಿತ್ತು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…