ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ.
ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಯ್ದೆ ಜಾರಿಗೊಳಿಸುವ ಬಗ್ಗೆ ತನ್ನ ನಿಲುವಿಗೆ ಬದ್ಧವಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ೧೪ ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುವಾರ್ ಭಲ್ಲಾ ಅವರು ಪ್ರವಾಣ ಪತ್ರ ಹಸ್ತಾಂತರಿಸಿದ್ದಾರೆ. ಆ ಮೂಲಕ ವಲಸಿಗರಲ್ಲಿ ಪೌರತ್ವದ ಭರವಸೆ ಮೂಡಿಸಿದ್ದಾರೆ. ಪೌರತ್ವ ಪಡೆದವರಲ್ಲಿ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.
ಸಿಎಎ ಕಾಯ್ದೆಯಡಿ ಭಾರತದ ಪೌರತ್ವ ಪಡೆಯುವ ಅರ್ಹತಾ ಅವಧಿಯನ್ನು ೧೧ ವರ್ಷಗಳಿಂದ ೫ ವರ್ಷಕ್ಕೆ ಇಳಿಸಲಾಗಿದೆ. ಈ ಕಾಯ್ದೆ ಅನ್ವಯ ೨೦೧೪ ಡಿಸೆಂಬರ್ ೩೧ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಪೌರತ್ವಕ್ಕೆ ಅರ್ಜಿ ಸಲ್ಲಿಸಲು ವೆಬ್ಸೈಟ್ವೊಂದನ್ನು ಆರಂಭಿಸಲಾಗಿತ್ತು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…