ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ.
ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಯ್ದೆ ಜಾರಿಗೊಳಿಸುವ ಬಗ್ಗೆ ತನ್ನ ನಿಲುವಿಗೆ ಬದ್ಧವಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ೧೪ ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುವಾರ್ ಭಲ್ಲಾ ಅವರು ಪ್ರವಾಣ ಪತ್ರ ಹಸ್ತಾಂತರಿಸಿದ್ದಾರೆ. ಆ ಮೂಲಕ ವಲಸಿಗರಲ್ಲಿ ಪೌರತ್ವದ ಭರವಸೆ ಮೂಡಿಸಿದ್ದಾರೆ. ಪೌರತ್ವ ಪಡೆದವರಲ್ಲಿ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.
ಸಿಎಎ ಕಾಯ್ದೆಯಡಿ ಭಾರತದ ಪೌರತ್ವ ಪಡೆಯುವ ಅರ್ಹತಾ ಅವಧಿಯನ್ನು ೧೧ ವರ್ಷಗಳಿಂದ ೫ ವರ್ಷಕ್ಕೆ ಇಳಿಸಲಾಗಿದೆ. ಈ ಕಾಯ್ದೆ ಅನ್ವಯ ೨೦೧೪ ಡಿಸೆಂಬರ್ ೩೧ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಪೌರತ್ವಕ್ಕೆ ಅರ್ಜಿ ಸಲ್ಲಿಸಲು ವೆಬ್ಸೈಟ್ವೊಂದನ್ನು ಆರಂಭಿಸಲಾಗಿತ್ತು.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…