ದೇಶ- ವಿದೇಶ

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಹಡಗು ದಿಕ್ಕು ಬದಲಿಸಿ ಹಿಂತಿರುಗಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗೆ ಸೇರಿದ ಎರಡು ಗನ್‌ಬೋಟ್‌ಗಳು ಜಲಸಂಧಿ ದಾಟುತ್ತಿದ್ದ ಟ್ಯಾಂಕರ್‌ಗಳ ಮೇಲೆ ಗುಂಡು ಹಾರಿಸಿವೆ ಎಂದು ಯುಕೆ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ ವರದಿ ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಟ್ಯಾಂಕರ್ ಸೇರಿದಂತೆ ಹಲವು ವಾಣಿಜ್ಯ ಹಡಗುಗಳು ತಮ್ಮ ಮಾರ್ಗ ಬದಲಾಯಿಸಿ ಹಿಂತಿರುಗಿವೆ.

ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕಿ ಕಚ್ಚಾ ತೈಲ ಸಾಗಿಸುತ್ತಿದ್ದ ಭಾರತೀಯ ಧ್ವಜದ ಸೂಪರ್ ಟ್ಯಾಂಕರ್ ಮೇಲೆ ಈ ದಾಳಿ ನಡೆದಿದೆ. ಹಡಗು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಹಡಗಿನ ಹೆಸರು ಅದು ತಲುಪಬೇಕಿದ್ದ ಸ್ಥಳವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಜಗತ್ತಿನ ತೈಲ ಪೂರೈಕೆಯಲ್ಲಿ ಸುಮಾರು 20 ಶೇಕಡಾ ಪಾಲನ್ನು ಸಾಗಿಸುವ ಹಾರ್ಮುಝ್ ಜಲಸಂಧಿಯಲ್ಲಿ ಈ ಘಟನೆಯಿಂದ ಸಂಚಾರ ತೀವ್ರವಾಗಿ ಅಸ್ತವ್ಯಸ್ತವಾಗಿದೆ. ಅಮೆರಿಕದ ‘ಆಪರೇಷನ್ ಎಪಿಕ್ ಫ್ಯೂರಿ’ ಕ್ರಮಕ್ಕೆ ಪ್ರತಿಯಾಗಿ ಇರಾನ್ ಕೈಗೊಂಡ ನಡೆಗಳಿಂದ ಕಳೆದ ಏಳು ವಾರಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ.

ಭಾರತ  ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago