ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಸಭೆಯಲ್ಲಿ ಪಾಕ್ ವಿರುದ್ಧ ಭಾರತ ಸರ್ಕಾರವು ರಾಜತಾಂತ್ರಿಕ ಯುದ್ಧ ಸಾರಿದ್ದು, ಪಾಕ್ ನಾಗರಿಕರು ದೇಶ ಬಿಡಲು 48 ಗಂಟೆ ಗಡುವು ನೀಡಲಾಗಿದೆ. ಸಿಂಧೂ ನದಿ ಒಪ್ಪಂದ ಅಂತ್ಯಗೊಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಪಾಕ್ ರಾಜತಾಂತ್ರಿಕ ಅಧಿಕಾರಿಗಳಿಗೆ ಗೇಟ್ಪಾಸ್ ನೀಡಲಾಗಿದೆ.
ಇನ್ನು ಅಟಾರಿ-ವಾಘಾ ಗಡಿ ಬಂದ್ ಮಾಡಲು ನಿರ್ಧಾರ ಮಾಡಲಾಗಿದ್ದು, ಪಾಕಿಸ್ತಾನದ ಪ್ರಜೆಗಳಿಗೆ ವಿಸಾ ನೀಡದಿರಲು ಭಾರತ ಸರ್ಕಾರ ನಿರ್ಧಾರ ಮಾಡಿದೆ. ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿಯನ್ನು ಗಡಿಪಾರು ಮಾಡಲು ನಿರ್ಧಾರ ಮಾಡಿದ್ದು, ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಮರ್ಮಾಘಾತ ನೀಡಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…