ದೇಶ- ವಿದೇಶ

ಪಹಲ್ಗಾಮ್‌ ದಾಳಿಗೆ ಪ್ರತೀಕಾರ: ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟ ಭಾರತ ಸರ್ಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಅಮಿತ್‌ ಶಾ, ವಿದೇಶಾಂಗ ಸಚಿವ ಜೈಶಂಕರ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ಸಭೆಯಲ್ಲಿ ಪಾಕ್‌ ವಿರುದ್ಧ ಭಾರತ ಸರ್ಕಾರವು ರಾಜತಾಂತ್ರಿಕ ಯುದ್ಧ ಸಾರಿದ್ದು, ಪಾಕ್‌ ನಾಗರಿಕರು ದೇಶ ಬಿಡಲು 48 ಗಂಟೆ ಗಡುವು ನೀಡಲಾಗಿದೆ. ಸಿಂಧೂ ನದಿ ಒಪ್ಪಂದ ಅಂತ್ಯಗೊಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಪಾಕ್‌ ರಾಜತಾಂತ್ರಿಕ ಅಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಲಾಗಿದೆ.

ಇನ್ನು ಅಟಾರಿ-ವಾಘಾ ಗಡಿ ಬಂದ್‌ ಮಾಡಲು ನಿರ್ಧಾರ ಮಾಡಲಾಗಿದ್ದು, ಪಾಕಿಸ್ತಾನದ ಪ್ರಜೆಗಳಿಗೆ ವಿಸಾ ನೀಡದಿರಲು ಭಾರತ ಸರ್ಕಾರ ನಿರ್ಧಾರ ಮಾಡಿದೆ. ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿಯನ್ನು ಗಡಿಪಾರು ಮಾಡಲು ನಿರ್ಧಾರ ಮಾಡಿದ್ದು, ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಮರ್ಮಾಘಾತ ನೀಡಿದೆ.

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

9 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

10 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

11 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

11 hours ago