ನವದೆಹಲಿ: ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.
ಭಾರತ-ಪಾಕ್ ನಡುವೆ ಉಂಟಾಗಿದ್ದ ಕದನಕ್ಕೆ ಬ್ರೇಕ್ ಬಿದ್ದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಸಚಿವ ಜೈಶಂಕರ್ ಅವರು, ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ. ಸದ್ಯಕ್ಕೆ ಸೇನಾಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ.
ಮೇ.12ರಂದು ಎರಡೂ ದೇಶಗಳು ಮಾತುಕತೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಅಂದಿನ ಮಾತುಕತೆಯತ್ತ ಎಲ್ಲರ ಚಿತ್ತ ನೆಟ್ಟಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…