ದೇಶ- ವಿದೇಶ

“ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌” ಸೇರಿದ ಭಾರತೀಯ ರೈಲ್ವೆ ಸಚಿವಾಲಯ

ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭಕ್ಕೆ ತೆರಳುವಲ್ಲಿ ಹೆಚ್ಚು ಜನರಿಗೆ ತನ್ನ ಸೇವೆಯನ್ನು ಒದಗಿಸಿರುವ ಮೂಲಕ ಭಾರತೀಯ ರೈಲ್ವೆ ಸಚಿವಾಲಯ “ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌”ನಲ್ಲಿ ಸೇರ್ಪಡೆಗೊಂಡಿದೆ.

ರೈಲ್ವೆ ಸಚಿವಾಲಯವು ಇದೇ ಫೆ.26 ರಂದು ನರೇಂದ್ರ ಮೋದಿ ಅವರಿಂದ ವರ್ಚುವಲ್‌ ಮೂಲಕ ವಿವಿಧೆಡೆ ರೈಲ್ವೆ ಬ್ರಿಡ್ಜ್‌, ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ದೇಶದ 2,140 ಯಾತ್ರಾ ಸ್ಥಳಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 40,19,516 ಜನರು ಭಾಗವಹಿಸಿದ್ದರು. ಇದರಿಂದ ಭಾರತೀಯ ರೈಲ್ವೆಯ ಬೃಹತ್‌ ಪ್ರಯತ್ನ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವಿಸಿದೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌, ರೈಲ್ವೆ ಜತೆ ಪ್ರಧಾನಿ ಮೋದಿ ಅವರು ವಿಶೇಷ ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಜನರಿಂದ ಮತ್ತೊಮ್ಮೆ ಆಶೀರ್ವಾದ ಪಡೆದು ಜನ ಸೇವೆ ಮಾಡಲು ಮೋದಿ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಹತ್ತಯ ವರ್ಷಗಳಿಂದ ರೈಲ್ವೆ ಅಭಿವೃದ್ಧಿಗೆ ಮೋದಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

2 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

2 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

13 hours ago