ದೇಶ- ವಿದೇಶ

“ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌” ಸೇರಿದ ಭಾರತೀಯ ರೈಲ್ವೆ ಸಚಿವಾಲಯ

ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭಕ್ಕೆ ತೆರಳುವಲ್ಲಿ ಹೆಚ್ಚು ಜನರಿಗೆ ತನ್ನ ಸೇವೆಯನ್ನು ಒದಗಿಸಿರುವ ಮೂಲಕ ಭಾರತೀಯ ರೈಲ್ವೆ ಸಚಿವಾಲಯ “ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌”ನಲ್ಲಿ ಸೇರ್ಪಡೆಗೊಂಡಿದೆ.

ರೈಲ್ವೆ ಸಚಿವಾಲಯವು ಇದೇ ಫೆ.26 ರಂದು ನರೇಂದ್ರ ಮೋದಿ ಅವರಿಂದ ವರ್ಚುವಲ್‌ ಮೂಲಕ ವಿವಿಧೆಡೆ ರೈಲ್ವೆ ಬ್ರಿಡ್ಜ್‌, ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ದೇಶದ 2,140 ಯಾತ್ರಾ ಸ್ಥಳಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 40,19,516 ಜನರು ಭಾಗವಹಿಸಿದ್ದರು. ಇದರಿಂದ ಭಾರತೀಯ ರೈಲ್ವೆಯ ಬೃಹತ್‌ ಪ್ರಯತ್ನ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವಿಸಿದೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌, ರೈಲ್ವೆ ಜತೆ ಪ್ರಧಾನಿ ಮೋದಿ ಅವರು ವಿಶೇಷ ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಜನರಿಂದ ಮತ್ತೊಮ್ಮೆ ಆಶೀರ್ವಾದ ಪಡೆದು ಜನ ಸೇವೆ ಮಾಡಲು ಮೋದಿ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಹತ್ತಯ ವರ್ಷಗಳಿಂದ ರೈಲ್ವೆ ಅಭಿವೃದ್ಧಿಗೆ ಮೋದಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

1 hour ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

1 hour ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

1 hour ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

3 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

4 hours ago