ಟೆಲ್ ಅವೀವ್: ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಒಂದು ವಾರದಿಂದ ಇಸ್ರೇಲ್ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್ ಸಂಘರ್ಷದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಬಿ ಪ್ಯಾಕ್ ಎನ್ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್ನಲ್ಲಿ ಉಳಿದುಕೊಂಡಿದೆ. ತುರ್ತಾಗಿ ನಮಗೆ ಸಹಾಯ ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಭಾರತೀಯ ತಂಡ ಮನವಿ ಮಾಡಿದೆ.
ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ನೀಡಲಾಗಿದ್ದು, ನಿಯೋಗದ ಸದಸ್ಯರ ಜೊತೆ ಗೃಹ ಸಚಿವ ಜಿ.ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





