ದೇಶ- ವಿದೇಶ

ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ಪರಾಕ್ರಮ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್‌ ಹೇಳಿದ್ದಿಷ್ಟು.!

ನವದೆಹಲಿ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್‌ಕ್ರಾಫ್ಟ್‌ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎ.ಪಿ.ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿ ವ್ಯವಸ್ಥೆಗಳು ಐದು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಮತ್ತು ವಾಯುಗಾಮಿ ಕಣ್ಗಾವಲು, ಮುಂಚಿನ ಎಚ್ಚರಿಕೆಗಾಗಿ ವಿನ್ಯಾಸಗೊಳಿಸಲಾದ ವಿಶೇಷ ಮಿಲಿಟರಿ ವಿಮಾನವಾದ AEW&C/ELINT ವಿಮಾನವನ್ನು ನಾಶಪಡಿಸಿವೆ ಎಂದು ಹೇಳಿದ್ದಾರೆ.

ಜಕೋಬಾದಲ್ಲಿ ನಿಲ್ಲಿಸಲಾಗಿದ್ದ ಕೆಲವು F16 ಜೆಟ್‌ಗಳು ಹಾಗೂ ಭೋಲಾರಿಯಲ್ಲಿ AEW&C ಅನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

ಹೆಚ್ಚಿನ ವಿವರಗಳ್ನನು ಬಹಿರಂಗಪಡಿಸಿದ ಐಎಎಫ್‌ ಮುಖ್ಯಸ್ಥರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಭಾರತವು ಮೇ.7ರಂದು ಪ್ರತೀಕಾರ ತೀರಿಸಿಕೊಳ್ಳುವ ಮೊದಲು ಕಟ್ಟಡಗಳನ್ನು ಗುರುತಿಸಲಾಗಿತ್ತು ಎಂದು ಹೇಳಿದರು. ಭಾರತೀಯ ದಾಳಿಯಿಂದ ಉಂಟಾದ ಹಾನಿಯ ನಿಖರತೆಯನ್ನು ಉಪಗ್ರಹ ಚಿತ್ರಗಳ ಮೂಲಕ ಲೆಕ್ಕಹಾಕಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

8 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

8 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

9 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

10 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

10 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

10 hours ago