A.P. Singh
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್ಕ್ರಾಫ್ಟ್ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿ ವ್ಯವಸ್ಥೆಗಳು ಐದು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಮತ್ತು ವಾಯುಗಾಮಿ ಕಣ್ಗಾವಲು, ಮುಂಚಿನ ಎಚ್ಚರಿಕೆಗಾಗಿ ವಿನ್ಯಾಸಗೊಳಿಸಲಾದ ವಿಶೇಷ ಮಿಲಿಟರಿ ವಿಮಾನವಾದ AEW&C/ELINT ವಿಮಾನವನ್ನು ನಾಶಪಡಿಸಿವೆ ಎಂದು ಹೇಳಿದ್ದಾರೆ.
ಜಕೋಬಾದಲ್ಲಿ ನಿಲ್ಲಿಸಲಾಗಿದ್ದ ಕೆಲವು F16 ಜೆಟ್ಗಳು ಹಾಗೂ ಭೋಲಾರಿಯಲ್ಲಿ AEW&C ಅನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.
ಹೆಚ್ಚಿನ ವಿವರಗಳ್ನನು ಬಹಿರಂಗಪಡಿಸಿದ ಐಎಎಫ್ ಮುಖ್ಯಸ್ಥರು, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ಮೇ.7ರಂದು ಪ್ರತೀಕಾರ ತೀರಿಸಿಕೊಳ್ಳುವ ಮೊದಲು ಕಟ್ಟಡಗಳನ್ನು ಗುರುತಿಸಲಾಗಿತ್ತು ಎಂದು ಹೇಳಿದರು. ಭಾರತೀಯ ದಾಳಿಯಿಂದ ಉಂಟಾದ ಹಾನಿಯ ನಿಖರತೆಯನ್ನು ಉಪಗ್ರಹ ಚಿತ್ರಗಳ ಮೂಲಕ ಲೆಕ್ಕಹಾಕಲಾಗಿದೆ ಎಂದು ಹೇಳಿದರು.
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…