ದೇಶ- ವಿದೇಶ

ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ಪರಾಕ್ರಮ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್‌ ಹೇಳಿದ್ದಿಷ್ಟು.!

ನವದೆಹಲಿ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್‌ಕ್ರಾಫ್ಟ್‌ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎ.ಪಿ.ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿ ವ್ಯವಸ್ಥೆಗಳು ಐದು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಮತ್ತು ವಾಯುಗಾಮಿ ಕಣ್ಗಾವಲು, ಮುಂಚಿನ ಎಚ್ಚರಿಕೆಗಾಗಿ ವಿನ್ಯಾಸಗೊಳಿಸಲಾದ ವಿಶೇಷ ಮಿಲಿಟರಿ ವಿಮಾನವಾದ AEW&C/ELINT ವಿಮಾನವನ್ನು ನಾಶಪಡಿಸಿವೆ ಎಂದು ಹೇಳಿದ್ದಾರೆ.

ಜಕೋಬಾದಲ್ಲಿ ನಿಲ್ಲಿಸಲಾಗಿದ್ದ ಕೆಲವು F16 ಜೆಟ್‌ಗಳು ಹಾಗೂ ಭೋಲಾರಿಯಲ್ಲಿ AEW&C ಅನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

ಹೆಚ್ಚಿನ ವಿವರಗಳ್ನನು ಬಹಿರಂಗಪಡಿಸಿದ ಐಎಎಫ್‌ ಮುಖ್ಯಸ್ಥರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಭಾರತವು ಮೇ.7ರಂದು ಪ್ರತೀಕಾರ ತೀರಿಸಿಕೊಳ್ಳುವ ಮೊದಲು ಕಟ್ಟಡಗಳನ್ನು ಗುರುತಿಸಲಾಗಿತ್ತು ಎಂದು ಹೇಳಿದರು. ಭಾರತೀಯ ದಾಳಿಯಿಂದ ಉಂಟಾದ ಹಾನಿಯ ನಿಖರತೆಯನ್ನು ಉಪಗ್ರಹ ಚಿತ್ರಗಳ ಮೂಲಕ ಲೆಕ್ಕಹಾಕಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago