ಕಝನ್(ರಷ್ಯಾ): ಭಾರತದ ಬೆಂಬಲ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಹೊರತು ಯುದ್ಧಕಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಸಮಾವೇಶದಲ್ಲಿ ಬುಧವಾರ ಪ್ರತಿಪಾದಿಸಿದ್ದಾರೆ.
ಇದರೊಂದಿಗೆ ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ.
ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಬ್ರಿಕ್ಸ್ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದ ಮೋದಿ, ಯುದ್ಧ, ಆರ್ಥಿಕ ಅನಿಶ್ಚಿತತೆ, ಹವಾಮಾನ ಬದಲಾವಣೆ ಹಾಗೂ ಸವಾಲುಗಳ ಬಗ್ಗೆ ಬ್ರಿಕ್ಸ್ ಸಮಾವೇಶದ ಭಾಷಣದಲ್ಲಿ ಶಾಂತಿ ಮಂತ್ರ ಪ್ರತಿಪಾದಿಸಿದ್ದಾರೆ.
ಭವಿಷ್ಯದ ಪೀಳಿಗೆಗೆ ಉತ್ತಮ ಅವಕಾಶಗಳನ್ನು ಒದಗಿಸಬೇಕಿದೆ. ಕೋವಿಡ್ ಮಾದರಿಯಲ್ಲಿ ಒಟ್ಟಾಗಿ ಹೋರಾಡಿ ಜಾಗತೀಕ ಸಮಸ್ಯೆಗಳಿಂದ ಪಾರಾಗಬೇಕಿದೆ ಎಂದಿದ್ದಾರೆ.
ಯುದ್ಧ ಕೊನೆಗಾಣಿಸುವಂತೆ ಪುಟಿನ್ಗೆ ಒತ್ತಾಯ
ಸಮಾವೇಶದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಮೋದಿ ಯುದ್ಧ ಕೊನೆಗಾಣಿಸುವಂತೆ ಪರೋಕ್ಷವಾಗಿ ಒತ್ತಡ ಹೇರಿದರು.
ರಷ್ಯ ಮತ್ತು ಉಕ್ರೇನ್ನಲ್ಲಿ ಶಾಂತಿ, ಸ್ಥಿರತೆ ಕಾಪಾಡಲು ಭಾರತ ಎಲ್ಲ ರೀತಿಯಿಂದಲೂ ಬೆಂಬಲ ನೀಡುತ್ತದೆ. ಸಂಘರ್ಷಪೀಡಿತ ಉಭಯ ದೇಶಗಳ ಮುಖ್ಯಸ್ಥರ ಜತೆ ಭಾರತ ನಿರಂತರವಾಗಿ ಸಂಪರ್ಕದಲ್ಲಿದೆ. ಯುದ್ಧದಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪರಸ್ಪರ ಶಾಂತಿ ಸಂಧಾನದ ಮೂಲಕ ಸಂಘರ್ಷ ಪರಿಹರಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ಭಾರತ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…