ಕಝನ್(ರಷ್ಯಾ): ಭಾರತದ ಬೆಂಬಲ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಹೊರತು ಯುದ್ಧಕಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಸಮಾವೇಶದಲ್ಲಿ ಬುಧವಾರ ಪ್ರತಿಪಾದಿಸಿದ್ದಾರೆ.
ಇದರೊಂದಿಗೆ ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ.
ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಬ್ರಿಕ್ಸ್ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದ ಮೋದಿ, ಯುದ್ಧ, ಆರ್ಥಿಕ ಅನಿಶ್ಚಿತತೆ, ಹವಾಮಾನ ಬದಲಾವಣೆ ಹಾಗೂ ಸವಾಲುಗಳ ಬಗ್ಗೆ ಬ್ರಿಕ್ಸ್ ಸಮಾವೇಶದ ಭಾಷಣದಲ್ಲಿ ಶಾಂತಿ ಮಂತ್ರ ಪ್ರತಿಪಾದಿಸಿದ್ದಾರೆ.
ಭವಿಷ್ಯದ ಪೀಳಿಗೆಗೆ ಉತ್ತಮ ಅವಕಾಶಗಳನ್ನು ಒದಗಿಸಬೇಕಿದೆ. ಕೋವಿಡ್ ಮಾದರಿಯಲ್ಲಿ ಒಟ್ಟಾಗಿ ಹೋರಾಡಿ ಜಾಗತೀಕ ಸಮಸ್ಯೆಗಳಿಂದ ಪಾರಾಗಬೇಕಿದೆ ಎಂದಿದ್ದಾರೆ.
ಯುದ್ಧ ಕೊನೆಗಾಣಿಸುವಂತೆ ಪುಟಿನ್ಗೆ ಒತ್ತಾಯ
ಸಮಾವೇಶದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಮೋದಿ ಯುದ್ಧ ಕೊನೆಗಾಣಿಸುವಂತೆ ಪರೋಕ್ಷವಾಗಿ ಒತ್ತಡ ಹೇರಿದರು.
ರಷ್ಯ ಮತ್ತು ಉಕ್ರೇನ್ನಲ್ಲಿ ಶಾಂತಿ, ಸ್ಥಿರತೆ ಕಾಪಾಡಲು ಭಾರತ ಎಲ್ಲ ರೀತಿಯಿಂದಲೂ ಬೆಂಬಲ ನೀಡುತ್ತದೆ. ಸಂಘರ್ಷಪೀಡಿತ ಉಭಯ ದೇಶಗಳ ಮುಖ್ಯಸ್ಥರ ಜತೆ ಭಾರತ ನಿರಂತರವಾಗಿ ಸಂಪರ್ಕದಲ್ಲಿದೆ. ಯುದ್ಧದಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪರಸ್ಪರ ಶಾಂತಿ ಸಂಧಾನದ ಮೂಲಕ ಸಂಘರ್ಷ ಪರಿಹರಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ಭಾರತ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…