ದೇಶ- ವಿದೇಶ

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ಹೇಳಿವೆ. ಇದು ಎಲ್‌ಎನ್‌ಜಿ ಪೂರೈಕೆ ಮೇಲೆ ಪರಿಣಾಮ ಬೀರಿದೆ.

ಪೆಟ್ರೊನೆಟ್‌ ಎಲ್‌ಎನ್‌ಜಿ ಕಂಪನಿಯು ದೇಶಕ್ಕೆ ಪೂರೈಕೆ ಆಗುವ ಎಲ್‌ಎನ್‌ಜಿ ಸ್ವೀಕರಿಸುವ ಅತಿದೊಡ್ಡ ಟರ್ಮಿನಲ್‌ ನಿರ್ವಹಣೆ ಮಾಡುತ್ತಿದೆ. ಜಲಸಂಧಿಯಲ್ಲಿ ಸೃಷ್ಟಿಯಾಗಿರುವ ಅಡ್ಡಿಯ ಕಾರಣದಿಂದಾಗಿ, ಈ ಕಂಪನಿಗೆ ಎಲ್‌ಎನ್‌ಜಿ ಪೂರೈಕೆ ಮಾಡುವವರು ಪೂರೈಕೆ ಕಷ್ಟ ಎಂದು ಹೇಳಿದ್ದಾರೆ. ಹೀಗಾಗಿ ಪೆಟ್ರೊನೆಟ್‌ ಎಲ್‌ಎನ್‌ಜಿ ಕೂಡ ತನ್ನಿಂದ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ತಿಳಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದರಿಂದಾಗಿ ಸರ್ಕಾರಿ ಸ್ವಾಮ್ಯದ ಗೇಲ್‌ ಲಿಮಿಟೆಡ್‌, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿ‍ಪಿಸಿಎಲ್‌) ಅನಿಲ ಪೂರೈಕೆಯನ್ನು ಕಡಿಮೆ ಮಾಡಿವೆ. ಈ ಕಂ‍ಪನಿಗಳು ದೇಶದಾದ್ಯಂತ ಇರುವ ರಸಗೊಬ್ಬರ ಘಟಕಗಳಿಗೆ ಅನಿಲ ಸರಬರಾಜು ಮಾಡುತ್ತವೆ.‘ಪರಿಸ್ಥಿತಿ ಸಹಜವಾಗಿದ್ದ ಮಟ್ಟಕ್ಕೆ ಹೋಲಿಸಿದರೆ ಈಗ ಅನಿಲ ಪೂರೈಕೆಯು ಶೇ 60ರಿಂದ ಶೇ.65ರಷ್ಟು ಮಾತ್ರ ಇದೆ’ ಎಂದು ಉದ್ಯಮದ ಮೂಲಗಳು ಹೇಳಿವೆ. ಇದರಿಂದಾಗಿ ಯೂರಿಯಾ ಉತ್ಪಾದನೆಯು ಘಟಕಗಳಲ್ಲಿ ಸರಿಸುಮಾರು ಶೇ.50ರಷ್ಟು ಕಡಿಮೆ ಆಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

29 mins ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

56 mins ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

1 hour ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

2 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

2 hours ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

2 hours ago