ದೇಶ- ವಿದೇಶ

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ಹೇಳಿವೆ. ಇದು ಎಲ್‌ಎನ್‌ಜಿ ಪೂರೈಕೆ ಮೇಲೆ ಪರಿಣಾಮ ಬೀರಿದೆ.

ಪೆಟ್ರೊನೆಟ್‌ ಎಲ್‌ಎನ್‌ಜಿ ಕಂಪನಿಯು ದೇಶಕ್ಕೆ ಪೂರೈಕೆ ಆಗುವ ಎಲ್‌ಎನ್‌ಜಿ ಸ್ವೀಕರಿಸುವ ಅತಿದೊಡ್ಡ ಟರ್ಮಿನಲ್‌ ನಿರ್ವಹಣೆ ಮಾಡುತ್ತಿದೆ. ಜಲಸಂಧಿಯಲ್ಲಿ ಸೃಷ್ಟಿಯಾಗಿರುವ ಅಡ್ಡಿಯ ಕಾರಣದಿಂದಾಗಿ, ಈ ಕಂಪನಿಗೆ ಎಲ್‌ಎನ್‌ಜಿ ಪೂರೈಕೆ ಮಾಡುವವರು ಪೂರೈಕೆ ಕಷ್ಟ ಎಂದು ಹೇಳಿದ್ದಾರೆ. ಹೀಗಾಗಿ ಪೆಟ್ರೊನೆಟ್‌ ಎಲ್‌ಎನ್‌ಜಿ ಕೂಡ ತನ್ನಿಂದ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ತಿಳಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದರಿಂದಾಗಿ ಸರ್ಕಾರಿ ಸ್ವಾಮ್ಯದ ಗೇಲ್‌ ಲಿಮಿಟೆಡ್‌, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿ‍ಪಿಸಿಎಲ್‌) ಅನಿಲ ಪೂರೈಕೆಯನ್ನು ಕಡಿಮೆ ಮಾಡಿವೆ. ಈ ಕಂ‍ಪನಿಗಳು ದೇಶದಾದ್ಯಂತ ಇರುವ ರಸಗೊಬ್ಬರ ಘಟಕಗಳಿಗೆ ಅನಿಲ ಸರಬರಾಜು ಮಾಡುತ್ತವೆ.‘ಪರಿಸ್ಥಿತಿ ಸಹಜವಾಗಿದ್ದ ಮಟ್ಟಕ್ಕೆ ಹೋಲಿಸಿದರೆ ಈಗ ಅನಿಲ ಪೂರೈಕೆಯು ಶೇ 60ರಿಂದ ಶೇ.65ರಷ್ಟು ಮಾತ್ರ ಇದೆ’ ಎಂದು ಉದ್ಯಮದ ಮೂಲಗಳು ಹೇಳಿವೆ. ಇದರಿಂದಾಗಿ ಯೂರಿಯಾ ಉತ್ಪಾದನೆಯು ಘಟಕಗಳಲ್ಲಿ ಸರಿಸುಮಾರು ಶೇ.50ರಷ್ಟು ಕಡಿಮೆ ಆಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

39 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

50 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago