ದೇಶ- ವಿದೇಶ

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ಹೇಳಿವೆ. ಇದು ಎಲ್‌ಎನ್‌ಜಿ ಪೂರೈಕೆ ಮೇಲೆ ಪರಿಣಾಮ ಬೀರಿದೆ.

ಪೆಟ್ರೊನೆಟ್‌ ಎಲ್‌ಎನ್‌ಜಿ ಕಂಪನಿಯು ದೇಶಕ್ಕೆ ಪೂರೈಕೆ ಆಗುವ ಎಲ್‌ಎನ್‌ಜಿ ಸ್ವೀಕರಿಸುವ ಅತಿದೊಡ್ಡ ಟರ್ಮಿನಲ್‌ ನಿರ್ವಹಣೆ ಮಾಡುತ್ತಿದೆ. ಜಲಸಂಧಿಯಲ್ಲಿ ಸೃಷ್ಟಿಯಾಗಿರುವ ಅಡ್ಡಿಯ ಕಾರಣದಿಂದಾಗಿ, ಈ ಕಂಪನಿಗೆ ಎಲ್‌ಎನ್‌ಜಿ ಪೂರೈಕೆ ಮಾಡುವವರು ಪೂರೈಕೆ ಕಷ್ಟ ಎಂದು ಹೇಳಿದ್ದಾರೆ. ಹೀಗಾಗಿ ಪೆಟ್ರೊನೆಟ್‌ ಎಲ್‌ಎನ್‌ಜಿ ಕೂಡ ತನ್ನಿಂದ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ತಿಳಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದರಿಂದಾಗಿ ಸರ್ಕಾರಿ ಸ್ವಾಮ್ಯದ ಗೇಲ್‌ ಲಿಮಿಟೆಡ್‌, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿ‍ಪಿಸಿಎಲ್‌) ಅನಿಲ ಪೂರೈಕೆಯನ್ನು ಕಡಿಮೆ ಮಾಡಿವೆ. ಈ ಕಂ‍ಪನಿಗಳು ದೇಶದಾದ್ಯಂತ ಇರುವ ರಸಗೊಬ್ಬರ ಘಟಕಗಳಿಗೆ ಅನಿಲ ಸರಬರಾಜು ಮಾಡುತ್ತವೆ.‘ಪರಿಸ್ಥಿತಿ ಸಹಜವಾಗಿದ್ದ ಮಟ್ಟಕ್ಕೆ ಹೋಲಿಸಿದರೆ ಈಗ ಅನಿಲ ಪೂರೈಕೆಯು ಶೇ 60ರಿಂದ ಶೇ.65ರಷ್ಟು ಮಾತ್ರ ಇದೆ’ ಎಂದು ಉದ್ಯಮದ ಮೂಲಗಳು ಹೇಳಿವೆ. ಇದರಿಂದಾಗಿ ಯೂರಿಯಾ ಉತ್ಪಾದನೆಯು ಘಟಕಗಳಲ್ಲಿ ಸರಿಸುಮಾರು ಶೇ.50ರಷ್ಟು ಕಡಿಮೆ ಆಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

12 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago