ದೇಶ- ವಿದೇಶ

ಚೀನಾ ವೈದ್ಯಕೀಯ ಕಾಲೇಜುಗಳ ಭಾರತೀಯ ವಿದ್ಯಾರ್ಥಿಗಳಿಗೆ ದೇಶಿ ಪ್ರಾಯೋಗಿಕ ತರಬೇತಿ: ಪ್ರತಿಕ್ರಿಯೆ ಕೇಳಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವಿದೇಶದಿಂದ ಹಿಂತಿರುಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿರುವ ಮನವಿ ಸಂಬಂಧ ಕೇರಳ ಹೈಕೋರ್ಟ್‌ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಭಿಪ್ರಾಯ ಕೇಳಿದೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಚೀನಾ ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ತೆರಳಿ ಅಧ್ಯಯನ ಮಾಡಲಾಗದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ಅಲ್ಲಿಗೆ ಮರಳುವವರೆಗೆ, ತಾತ್ಕಾಲಿಕವಾಗಿ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ.

ಅರ್ಜಿದಾರರು ಚೀನಾಕ್ಕೆ ಮರಳಲು ಸಾಧ್ಯವಾಗುವವರೆಗೆ ತಾತ್ಕಾಲಿಕ ಕ್ರಮವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅನುಮತಿ ನೀಡಬಹುದೇ ಎಂಬ ಬಗ್ಗೆ ಆಯೋಗದ ನಿಲುವೇನು ಎಂಬ ಕುರಿತು ಎನ್‌ಎಂಸಿಯ ಜವಾಬ್ದಾರಿಯುತ ಅಧಿಕಾರಿಯೊಬ್ಬರು ಅಫಿಡವಿಟ್‌ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ವಿ ಜಿ ಅರುಣ್ ಸೂಚಿಸಿದ್ದಾರೆ.

ವಿದೇಶದಲ್ಲಿ, ಅದರಲ್ಲಿಯೂ ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ ರೂಪಿಸಲಾದ ನೋಂದಾಯಿತ ಸಂಸ್ಥೆಯಾದ ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ಕೋವಿಡ್‌ನಿಂದಾಗಿ 2020 ರ ಆರಂಭದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ಮರಳುವಂತಾಗಿತ್ತು. ಸಾಂಕ್ರಾಮಿಕ ರೋಗ ಶೂನ್ಯ ಸ್ಥಿತಿಗೆ ಬರುವವರೆಗೆ ಚೀನಾ ಸರ್ಕಾರ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತನ್ನ ವಿವಿಗಳಲ್ಲಿ ಅವಕಾಶ ಕಲ್ಪಿಸುವುದು ಅಸಂಭವದ ಮಾತಾಗಿದೆ. ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ಸಮನಾದ ಸೌಲಭ್ಯಗಳನ್ನು ಪಡೆದ ಮತ್ತು ಎನ್‌ಎಂಸಿ ಅನುಮೋದಿಸಿರುವ ಚೀನಾದ ವಿವಿಗಳಲ್ಲಿ ವಿದ್ಯಾರ್ಥಿಗಳು ಪದವಿ ಪಡೆಯುತ್ತಿದ್ದಾರೆ ಎಂದು ಅರ್ಜಿ ವಿವರಿಸಿದೆ.

ಅವರು ಭಾರತಕ್ಕೆ ಮರಳಿದಾಗಿನಿಂದಲೂ ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿದ್ದು ಪ್ರಾಯೋಗಿಕ ತರಗತಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗೆ ಹಾಜರಾಗಲು ಅನುವು ಮಾಡಿಕೊಡಬೇಕು ಎಂದು ಕೋರಲಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 29ಕ್ಕೆ ನಿಗದಿಯಾಗಿದ್ದು ಅಷ್ಟರೊಳಗೆ ಎನ್‌ಎಂಸಿ ಅಫಿಡವಿಟ್‌ ಸಲ್ಲಿಸುವ ನಿರೀಕ್ಷೆ ಇದೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago