ದೇಶ- ವಿದೇಶ

ಚೀನಾ ವೈದ್ಯಕೀಯ ಕಾಲೇಜುಗಳ ಭಾರತೀಯ ವಿದ್ಯಾರ್ಥಿಗಳಿಗೆ ದೇಶಿ ಪ್ರಾಯೋಗಿಕ ತರಬೇತಿ: ಪ್ರತಿಕ್ರಿಯೆ ಕೇಳಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವಿದೇಶದಿಂದ ಹಿಂತಿರುಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿರುವ ಮನವಿ ಸಂಬಂಧ ಕೇರಳ ಹೈಕೋರ್ಟ್‌ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಭಿಪ್ರಾಯ ಕೇಳಿದೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಚೀನಾ ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ತೆರಳಿ ಅಧ್ಯಯನ ಮಾಡಲಾಗದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ಅಲ್ಲಿಗೆ ಮರಳುವವರೆಗೆ, ತಾತ್ಕಾಲಿಕವಾಗಿ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ.

ಅರ್ಜಿದಾರರು ಚೀನಾಕ್ಕೆ ಮರಳಲು ಸಾಧ್ಯವಾಗುವವರೆಗೆ ತಾತ್ಕಾಲಿಕ ಕ್ರಮವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅನುಮತಿ ನೀಡಬಹುದೇ ಎಂಬ ಬಗ್ಗೆ ಆಯೋಗದ ನಿಲುವೇನು ಎಂಬ ಕುರಿತು ಎನ್‌ಎಂಸಿಯ ಜವಾಬ್ದಾರಿಯುತ ಅಧಿಕಾರಿಯೊಬ್ಬರು ಅಫಿಡವಿಟ್‌ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ವಿ ಜಿ ಅರುಣ್ ಸೂಚಿಸಿದ್ದಾರೆ.

ವಿದೇಶದಲ್ಲಿ, ಅದರಲ್ಲಿಯೂ ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ ರೂಪಿಸಲಾದ ನೋಂದಾಯಿತ ಸಂಸ್ಥೆಯಾದ ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ಕೋವಿಡ್‌ನಿಂದಾಗಿ 2020 ರ ಆರಂಭದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ಮರಳುವಂತಾಗಿತ್ತು. ಸಾಂಕ್ರಾಮಿಕ ರೋಗ ಶೂನ್ಯ ಸ್ಥಿತಿಗೆ ಬರುವವರೆಗೆ ಚೀನಾ ಸರ್ಕಾರ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ತನ್ನ ವಿವಿಗಳಲ್ಲಿ ಅವಕಾಶ ಕಲ್ಪಿಸುವುದು ಅಸಂಭವದ ಮಾತಾಗಿದೆ. ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ಸಮನಾದ ಸೌಲಭ್ಯಗಳನ್ನು ಪಡೆದ ಮತ್ತು ಎನ್‌ಎಂಸಿ ಅನುಮೋದಿಸಿರುವ ಚೀನಾದ ವಿವಿಗಳಲ್ಲಿ ವಿದ್ಯಾರ್ಥಿಗಳು ಪದವಿ ಪಡೆಯುತ್ತಿದ್ದಾರೆ ಎಂದು ಅರ್ಜಿ ವಿವರಿಸಿದೆ.

ಅವರು ಭಾರತಕ್ಕೆ ಮರಳಿದಾಗಿನಿಂದಲೂ ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿದ್ದು ಪ್ರಾಯೋಗಿಕ ತರಗತಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗೆ ಹಾಜರಾಗಲು ಅನುವು ಮಾಡಿಕೊಡಬೇಕು ಎಂದು ಕೋರಲಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 29ಕ್ಕೆ ನಿಗದಿಯಾಗಿದ್ದು ಅಷ್ಟರೊಳಗೆ ಎನ್‌ಎಂಸಿ ಅಫಿಡವಿಟ್‌ ಸಲ್ಲಿಸುವ ನಿರೀಕ್ಷೆ ಇದೆ.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

32 mins ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

3 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

3 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

3 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

9 hours ago